Friday, Apr 26 2024 | Time 15:26 Hrs(IST)
Entertainment Share

ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

ಬೆಂಗಳೂರು, ಜೂನ್ 24 (ಯುಎನ್ಐ) ಕನ್ನಡ ಚಿತ್ರರಂಗದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚಂದ್ರು ಸೋಮವಾರ ಬೆಳಗ್ಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರಿಗೆ ಆಂಜಿಯೋಗ್ರಾಂ ನಡೆಯಲಿದೆ. ಈ ಹಿಂದೆಯೂ ಅವರು ಒಂದು ಬಾರಿ ಆಂಜಿಯೋಗ್ರಾಂ ಮಾಡಿಸಿಕೊಂಡಿದ್ದರು.

ಇನ್ನೆರಡು ದಿನಗಳ ಬಳಿಕ ಚಂದ್ರು ಅವರನ್ನು ಡಿಸಾರ್ಚ್ ಮಾಡಲಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಹಾಸ್ಯ ಹಾಗೂ ಖಳನಾಯಕನ ಪಾತ್ರಗಳಿಗೆ ಜೀವ ತುಂಬುವ ಮುಖ್ಯಮಂತ್ರಿ ಚಂದ್ರು, ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ.

ಯುಎನ್ಐ ಎಸ್ಎ ವಿಎನ್ 1400

There is no row at position 0.