SpecialPosted at: Apr 20 2019 11:20PM Shareಸಿಧುಗೆ ಚುನಾವಣಾ ಆಯೋಗದಿಂದ ನೋಟೀಸ್ನವದೆಹಲಿ, ಏ 20, (ಯುಎನ್ಐ)- ಪಂಜಾಬ್ ಸಚಿವ ನವೋಜತ್ ಸಿಂಗ್ ಸಿಧು ಅವರಿಗೆ ಬಿಹಾರದ ಕೋಟಿಹಾರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ನೋಟೀಸ್ ನೀಡಿದೆ. ನೀತಿ ಸಂಹೀತಿಯನ್ನು ಉಲ್ಲಂಘಿಸಿದ ಆರೋಪದಡಿ ಸಿಧು ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟೀಸ್ ಜಾರಿ ಮಾಡಿದ್ದು, 24 ಗಂಟೆಗಳ ಒಳಗೆ ಉತ್ತರಿಸುವಂತೆ ತಿಳಿಸಿದೆ. ಕೋಟಿಹಾರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಸಿಧು ಅವರು ಪ್ರಚೋದನಕಾರಿ ಭಾಷಣ ಮಾಡಿದ್ದು, ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಫ್ಲೇಯಿಂಗ್ ಸ್ಕ್ವಾಡ್ ಕಟಿಹಾರ್ ಜಿಲ್ಲೆಯ ಬರ್ ಸೋಯಿ ಠಾಣೆಯಲ್ಲಿ ದೂರು ನೀಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಸೋಮವಾರ ಸಿಧು ಅವರು ಕಾಂಗ್ರೆಸ್ ಅಭ್ಯರ್ಥಿ ತಾರಿಖ್ ಅನ್ವರ್ ಪರ ಪ್ರಚಾರ ಮಾಡುವ ವೇಳೆ, ಈ ಕ್ಷೇತ್ರದಲ್ಲಿ ಮುಸ್ಲಿಮರು ಹೆಚ್ಚಿದ್ದು, ನಿವೆಲ್ಲರು ಒಗ್ಗಟ್ಟನ್ನು ಪ್ರದರ್ಶಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಕೇಳಿಕೊಂಡಿದ್ದರು. ಯುಎನ್ಐ ವಿಎನ್ಎಲ್ ಕೆಎಸ್ವಿ 2312