ElectionPosted at: Apr 20 2019 8:26PM Shareಭಾರೀ ಬಹುಮತದೊಂದಿಗೆ ಬಿಜೆಪಿಯಿಂದ ಸರ್ಕಾರ ರಚನೆ: ರಾಜನಾಥ್ ಸಿಂಗ್ ವಿಶ್ವಾಸ
ಭಾರೀ ಬಹುಮತದೊಂದಿಗೆ ಬಿಜೆಪಿಯಿಂದ ಸರ್ಕಾರ ರಚನೆ: ರಾಜನಾಥ್ ಸಿಂಗ್ ವಿಶ್ವಾಸ ಜಾನ್ಸಿ/ಜಲಾನ್ ಏ 20(ಯುಎನ್ಐ)- ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವುದರೊಂದಿಗೆ ಬಿಜೆಪಿ ಮತ್ತೊಮ್ಮೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಇಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿಲ್ಲ. ಈ ಅವಧಿಯಲ್ಲಿ ಸಮಾಜದ ಎಲ್ಲ ವರ್ಗದ ಪ್ರತಿಯೊಬ್ಬರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಯಾವುದೇ ತಾರತಮ್ಯವಿಲ್ಲದೆ ನರೇಂದ್ರಮೋದಿ ನೇತೃತ್ವದ ಸರ್ಕಾರ ಅನೇಕ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ.
ಕಳೆದ 70 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದ ಕಾಂಗ್ರೆಸ್, ಇದೀಗ ಸುಳ್ಳು ಭರವಸೆಗಳೊಂದಿಗೆ ಜನರನ್ನು ದಾರಿ ತಪ್ಪಿಸಲು ಯತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿತ್ತು. ಇದು ದೇಶದ ಅಭಿವೃದ್ಧಿಗೆ ಅಡ್ಡಗಾಲು ಹಾಕಿತು ಎಂದು ಅವರು ದೂರಿದ್ದಾರೆ.
ರಾಜಕೀಯ ಇಚ್ಛಾಶಕ್ತಿ ಹಾಗೂ ನರೇಂದ್ರಮೋದಿ ಸರ್ಕಾರದ ಬೆಂಬಲದೊಂದಿಗೆ ಭಾರತೀಯ ಸೇನಾ ಪಡೆಗಳು ಪಾಕಿಸ್ತಾನ ನೆಲದಲ್ಲಿನ ಉಗ್ರರ ನೆಲೆಗಳನ್ನು ನಾಶ ಪಡಿಸಿವೆ. ನರೇಂದ್ರಮೋದಿ ಆಡಳಿತದಲ್ಲಿ ಭಾರತಕ್ಕೆ ವಿಶ್ವಮಟ್ಟದಲ್ಲಿ ಮಾನ್ಯತೆ ಮತ್ತು ಗೌರವ ಸಿಕ್ಕಿದೆ. ಅಭಿವೃದ್ಧಿಯಲ್ಲಿ ಇದೇ ವೇಗದಲ್ಲಿ ಸಾಗಿದರೆ 2030ರ ವೇಳೆಗೆ ಭಾರತ ಅತಿ ಪ್ರಬಲ ರಾಷ್ಟ್ರಗಳಲ್ಲಿ ಒಂದಾಗಲಿದೆ ಎಂದು ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯುಎನ್ಐ ಎಸ್ಎಲ್ಎಸ್ ಕೆವಿಆರ್ 1942